Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:22 - ಕನ್ನಡ ಸತ್ಯವೇದವು C.L. Bible (BSI)

22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ರಕ್ತವನ್ನು ಕೂಡಿಸಿ ಬಲಿಪೀಠಕ್ಕೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಬಲಿಪೀಠಕ್ಕೆ ಪ್ರೋಕ್ಷಿಸಿದರು. ಆಮೇಲೆ ಕುರಿದನಗಳನ್ನು ವಧಿಸಿ ಅವುಗಳ ರಕ್ತವನ್ನೂ ಬಲಿಪೀಠಕ್ಕೆ ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಎರಚಿದರು. ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿದರು. ಆಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಎರಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಜಕರು ಹೋರಿಗಳನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು. ಅನಂತರ ಕುರಿಮರಿಗಳನ್ನು ವಧಿಸಿ ಅದರ ರಕ್ತವನ್ನೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು, ಪೀಠದ ಮೇಲೆ ಚಿಮುಕಿಸಿದರು. ಟಗರುಗಳನ್ನು ವಧಿಸಿ ರಕ್ತವನ್ನು ಚಿಮುಕಿಸಿದರು. ಕುರಿಮರಿಗಳನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವುಗಳನ್ನು ವಧಿಸಿ, ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಮೇಲೆ ಚಿಮುಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:22
9 ತಿಳಿವುಗಳ ಹೋಲಿಕೆ  

ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.


ಬಳಿಕ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಕಿಂಚಿತ್ತನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗು ಹಾಗು ಬಲಗಾಲಿನ ಹೆಬ್ಬೆಟ್ಟಿಗು ಹಚ್ಚಿದನು. ಉಳಿದ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು.


ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.


ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.


ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಲೇವಿಯರು ಪಾಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು