Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:25 - ಕನ್ನಡ ಸತ್ಯವೇದವು C.L. Bible (BSI)

25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಅವನು ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದ ಭಜಿಸುವದಕ್ಕೋಸ್ಕರ ಲೇವಿಯರನ್ನು ದಾವೀದ, ರಾಜದರ್ಶಿಯಾದ ಗಾದ್, ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ಇರಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:25
19 ತಿಳಿವುಗಳ ಹೋಲಿಕೆ  

ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್ ಹಾಗು ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದುದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣ ಇರಲಿಲ್ಲ.


ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು.


ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.


ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.


ದೇವರು ದಾವೀದನ ದರ್ಶಿಯಾದ ಗಾದನಿಗೆ,


ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.


ಜೆರುಸಲೇಮಿನಲ್ಲಿ ಕೂಡಿಬಂದ ಇಸ್ರಯೇಲರು ಏಳು ದಿನಗಳವರೆಗೂ ಮಹಾಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಸರ್ವೇಶ್ವರನನ್ನು ಪ್ರತಿದಿನವೂ ಕೀರ್ತಿಸುತ್ತಿದ್ದರು.


ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು