Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:27 - ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸರ್ವಾಂಗಹೋಮಸಮರ್ಪಣೆಯು ಪ್ರಾರಂಭಿಸಿದೊಡನೆ ಇಸ್ರಾಯೇಲ್‍ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವದೂ ತುತೂರಿಯೂದುವದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:27
9 ತಿಳಿವುಗಳ ಹೋಲಿಕೆ  

ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.


ಒಳ್ಳೆಯವನಾದ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.


ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.


ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು.


ದಹನಬಲಿ ಸಮರ್ಪಣೆಯು ಮುಗಿಯುವವರೆಗೆ ಸಭೆಸೇರಿದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಇದ್ದರು; ಗಾಯಕರು ಗಾನ ಮಾಡುತ್ತಾ ಇದ್ದರು; ತುತೂರಿ ಊದುವವರು ಊದುತ್ತಾ ಇದ್ದರು.


ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.


ಜೆರುಸಲೇಮಿನಲ್ಲಿ ಕೂಡಿಬಂದ ಇಸ್ರಯೇಲರು ಏಳು ದಿನಗಳವರೆಗೂ ಮಹಾಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಸರ್ವೇಶ್ವರನನ್ನು ಪ್ರತಿದಿನವೂ ಕೀರ್ತಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು