Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:5 - ಕನ್ನಡ ಸತ್ಯವೇದವು C.L. Bible (BSI)

5 “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧಪಡಿಸಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:5
21 ತಿಳಿವುಗಳ ಹೋಲಿಕೆ  

ಮೋಶೆಯಿಂದ ಪ್ರಕಟವಾದ ಸರ್ವೇಶ್ವರನ ವಿಧಿಗನುಸಾರ ನಿಮ್ಮ ಸಹೋದರರು ಪಾಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


“ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ಆಗ ಮೋಶೆ ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ; ಯಾವ ಪುರುಷನು ಸ್ತ್ರೀಸಂಗ ಮಾಡಬಾರದು,” ಎಂದು ಹೇಳಿದನು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಆಮೇಲೆ ಯಾಜಕರನ್ನೂ ಲೇವಿಯರನ್ನೂ ದೇವಾಲಯದ ಪೂರ್ವದಿಕ್ಕಿನ ಬಯಲಿನಲ್ಲಿ ಕೂಡಿಸಿ ಅವರಿಗೆ,


ಆ ಕೊಠಡಿಯಿಂದ ಹೊರಗೆ ಹಾಕಿಸಿ ಕೊಠಡಿಯನ್ನು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಅಲ್ಲಿಡಿಸಿದೆ.


ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಿಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು