Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:7 - ಕನ್ನಡ ಸತ್ಯವೇದವು C.L. Bible (BSI)

7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು; ಇಸ್ರಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಾರತಿ ಎತ್ತುವುದನ್ನೂ ದಹನಬಲಿ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದರ ಮಂಟಪದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ನಂದಿಸಿ ಇಸ್ರಾಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಹಾಕುವದನ್ನೂ ಸರ್ವಾಂಗಹೋಮ ಸಮರ್ಪಿಸುವದನ್ನೂ ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ದೇವಾಲಯದ ಮಂಟಪದ ಬಾಗಿಲನ್ನು ಮುಚ್ಚಿ ಉರಿಯುತ್ತಿದ್ದ ದೀಪಗಳನ್ನು ನಂದಿಸಿಬಿಟ್ಟರು. ಇಸ್ರೇಲ್ ದೇವರಾದ ಯೆಹೋವನಿಗೆ ಪವಿತ್ರ ಸ್ಥಳದಲ್ಲಿ ಧೂಪಸುಡುವದನ್ನೂ ಸರ್ವಾಂಗಹೋಮಗಳನ್ನು ಅರ್ಪಿಸುವದನ್ನೂ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:7
7 ತಿಳಿವುಗಳ ಹೋಲಿಕೆ  

ಇದಲ್ಲದೆ, ಅಹಾಜನು ದೇವಾಲಯದ ಸಾಮಗ್ರಿಗಳನ್ನು ಕೂಡಿಸಿ, ಅವುಗಳನ್ನು ಚೂರುಚೂರು ಮಾಡಿಬಿಟ್ಟನು; ಸರ್ವೇಶ್ವರನ ಆಲಯದ ಬಾಗಿಲುಗಳನ್ನು ಮುಚ್ಚಿ ಜೆರುಸಲೇಮಿನ ಪ್ರತಿಯೊಂದು ಮೂಲೆಯಲ್ಲೂ ಯಜ್ಞವೇದಿಗಳನ್ನು ಕಟ್ಟಿಸಿದನು.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.


ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.


ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು