Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:12 - ಕನ್ನಡ ಸತ್ಯವೇದವು C.L. Bible (BSI)

12 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:12
19 ತಿಳಿವುಗಳ ಹೋಲಿಕೆ  

ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.


ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಎಂಬ ಲೇವಿಯರು ಮುಂದೆ ಬಂದು ತಮ್ಮ ಸಹೋದರರನ್ನು ಒಂದುಗೂಡಿಸಿದರು. ಅವರು ಅರಸನ ಆಜ್ಞಾಧಾರಕರಾಗಿ ಸರ್ವೇಶ್ವರನ ಧರ್ಮಶಾಸ್ತ್ರವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಸರ್ವೇಶ್ವರನ ಆಲಯವನ್ನು ಶುದ್ಧೀಕರಿಸುವುದಕ್ಕೆ ಸಿದ್ಧರಾದರು.


ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು