Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:10 - ಕನ್ನಡ ಸತ್ಯವೇದವು C.L. Bible (BSI)

10 ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚಾದೋಕನ ಕುಲದ ಮಹಾಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದ್ದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:10
30 ತಿಳಿವುಗಳ ಹೋಲಿಕೆ  

ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ತುಂಡುಗಳನ್ನು ಶಿಷ್ಯರು ಏಳು ಕುಕ್ಕೆಗಳ ತುಂಬ ತುಂಬಿಸಿಕೊಂಡರು.


ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ.


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ಆಗ ಮಹಾಯಾಜಕ ಅಜರ್ಯನು ಹಾಗು ಧೈರ್ಯಶಾಲಿಗಳಾದ ಎಂಬತ್ತು ಮಂದಿ ಇತರ ಯಾಜಕರು, ಅರಸ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು,


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.


ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.


ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಬಳಿ ಆ ರಾಶಿಗಳ ಬಗ್ಗೆ ವಿಚಾರಿಸಿಧಾಗ,


ಅರಸ ಹಿಜ್ಕೀಯನ ಮತ್ತು ಸರ್ವೇಶ್ವರನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.


ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ನಿರ್ಮಾಣ ಕೆಲಸ ಮುಗಿಸುವುದಕ್ಕೆ ಬೇಕಾಗುವುದಕ್ಕಿಂತಲೂ ಹೆಚ್ಚಾಗಿ ಸರಕುಸಾಮಗ್ರಿಗಳನ್ನು ಶೇಖರಿಸಲಾಗಿತ್ತು.


ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.


ನಮ್ಮ ದೇವರಾದ ಸರ್ವೇಶ್ವರಾ, ನಿಮ್ಮ ಶ್ರೀನಾಮಕ್ಕೆ ಒಂದು ನಿಲಯ ನಿರ್ಮಿಸಲು ನಾವು ಸಂಗ್ರಹಿಸಿರುವ ಈ ಎಲ್ಲಾ ವಸ್ತುಗಳು ನಮಗೆ ದೊರಕಿರುವುದು ನಿಮ್ಮಿಂದಲೇ. ಇವೆಲ್ಲವೂ ನಿಮ್ಮವೇ.


ಆಗ ನಿನ್ನ ಕಣಜಗಳು ದವಸಧಾನ್ಯದಿಂದ ಭರ್ತಿಯಾಗುವುವು, ನಿನ್ನ ತೊಟ್ಟಿಗಳು ದ್ರಾಕ್ಷಾರಸದಿಂದ ತುಂಬಿ ತುಳುಕುವುವು.


ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು