Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:14 - ಕನ್ನಡ ಸತ್ಯವೇದವು C.L. Bible (BSI)

14 ಪೂರ್ವದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ಲನ ಮಗ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅದು ಮಾತ್ರವಲ್ಲ, ಸರ್ವೇಶ್ವರನಿಗೆ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:14
22 ತಿಳಿವುಗಳ ಹೋಲಿಕೆ  

ಸ್ವೀಕರಿಸು ನಾನು ಉಸುರುವ ಸ್ತುತಿಯರ್ಪಣೆಯನು I ಪ್ರಭೂ, ನನಗೆ ಕಲಿಸು ನಿನ್ನ ವಿಧಿನಿಯಮಗಳನು II


ಆಮೇಲೆ ಉಗ್ರಾಣಗಳನ್ನು ನೋಡಿಕೊಳ್ಳುವುದಕ್ಕೆ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆ. ಇವರೆಲ್ಲರೂ ನಂಬಿಕಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.


ಬಾಬಿಲೋನ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರವನ್ನು, ಹಾಗು ಇಸ್ರಯೇಲ್ ಜನಸಾಮಾನ್ಯರೂ ಯಾಜಕರೂ ಜೆರುಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು, ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.


ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.


ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.


ಲೇವಿಯರಲ್ಲಿ ಪ್ರತಿದಿನವೂ ಪೂರ್ವ ಬಾಗಿಲನ್ನು ಆರು ಮಂದಿ, ಪಶ್ಚಿಮ ಬಾಗಿಲನ್ನು ನಾಲ್ಕು ಮಂದಿ, ದಕ್ಷಿಣ ಬಾಗಿಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಿಲುಗಳನ್ನು ಇಬ್ಬಿಬ್ಬರು,


ಪೂರ್ವದಿಕ್ಕಿನ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತ್ತು. ಬಹು ವಿವೇಕವುಳ್ಳ ಪಂಚಾಯತಗಾರನಾಗಿರುವ ಅವನ ಮಗ ಜೆಕರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತ್ತು.


ಈ ದ್ವಾರಪಾಲಕ ವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಸರ್ವೇಶ್ವರನ ಆಲಯದಲ್ಲಿ ಸೇವೆಮಾಡುತ್ತಿದ್ದರು.


ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.


“ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.


‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”


“ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.


ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ, ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನದ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು.


“ಇಸ್ರಯೇಲರೇ ಆಗಲಿ, ಅವರ ನಡುವೆ ವಾಸಿಸುವವರೇ ಆಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವೇಶ್ವರನಾದ ನನಗೆ ದಹನ ಬಲಿದಾನ ಮಾಡುವಾಗ


ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.


ಅಶೇರನ ಮಕ್ಕಳು - ಇಮ್ನಾ, ಇಷ್ವಾ, ಇಷಿವೀ, ಬೆರೀಗಾ ಮತ್ತು ಇವರ ತಂಗಿ ಸೆರಹ; ಬೆರೀಗಾನ ಮಕ್ಕಳು - ಹೆಬೆರ್ ಮತ್ತು ಮಲ್ಕೀಯೇಲ್;


ಅರಸ ಹಿಜ್ಕೀಯನ ಮತ್ತು ಸರ್ವೇಶ್ವರನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.


ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸಮಾಡದೆ, ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು