Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:12 - ಕನ್ನಡ ಸತ್ಯವೇದವು C.L. Bible (BSI)

12 ಹಿಜ್ಕೀಯನು ಒಂದೇ ಬಲಿಪೀಠದ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ ಜೆರುಸಲೇಮಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನು ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆತನ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:12
14 ತಿಳಿವುಗಳ ಹೋಲಿಕೆ  

ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.


‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,


“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ :- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,


ಹಿಜ್ಕೀಯನು, ‘ನಮ್ಮ ದೇವರಾದ ಸರ್ವೇಶ್ವರಸ್ವಾಮಿ ಅಸ್ಸೀರಿಯಾದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು,’ ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕೇ ಅಲ್ಲದೆ ಮತ್ತೇನಕ್ಕೂ ಅಲ್ಲ.


ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.


ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು