Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅನೇಕರು ಸೇರಿ - ಇಲ್ಲಿಗೆ ಬರುವ ಅಶ್ಶೂರದ ರಾಜರಿಗೆ ಬೇಕಾದಷ್ಟು ನೀರು ಯಾಕೆ ಸಿಕ್ಕಬೇಕು ಎಂದುಕೊಂಡು ಎಲ್ಲಾ ಬಾವಿಗಳನ್ನೂ ದೇಶಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:4
15 ತಿಳಿವುಗಳ ಹೋಲಿಕೆ  

ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು.


“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?


ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.


ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ಹಿಜ್ಕೀಯನ ಉಳಿದ ಚರಿತ್ರೆ, ಅವನ ಪರಾಕ್ರಮಕಾರ್ಯ ಹಾಗು ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರ, ಇವು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರಿಯಕ್ಕೆ ವಿರುದ್ಧ ದಂಡೆತ್ತಿಬಂದಿದ್ದನು.


ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಪ್ರಮುಖರ ಮತ್ತು ಶೂರರ ಮುಂದೆ ಆ ಪ್ರಸ್ತಾಪವೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.


ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿ ಶೇಖರಿಸಿಡು. ನಿನ್ನ ಕೋಟೆಯನ್ನು ಭದ್ರಪಡಿಸು. ಮಣ್ಣಿಗೆ ಇಳಿ; ಜೇಡಿಯನ್ನು ತುಳಿ; ಇಟ್ಟಿಗೆಯ ಅಚ್ಚನ್ನು ಹಿಡಿ.


ದಾವೀದನ ಕೋಟೆಯ ಬಿರುಕುಗಳು ಬಹಳವೆಂಬುದನ್ನು ಗಮನಿಸಿದಿರಿ. ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು