Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:5 - ಕನ್ನಡ ಸತ್ಯವೇದವು C.L. Bible (BSI)

5 ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಅರಸನು ಧೈರ್ಯಗೊಂಡು ಅಲ್ಲಲ್ಲಿ ಬಿದ್ದುಹೋದ ಪೌಳಿಗೋಡೆಯನ್ನು ಜೀರ್ಣೋದ್ಧಾರಮಾಡಿಸಿ ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿ ದಾವೀದ ನಗರದ ವಿುಲ್ಲೋಕೋಟೆಯನ್ನು ಭದ್ರಪಡಿಸಿ ಅನೇಕಾಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಹಿಜ್ಕೀಯನು ಜೆರುಸಲೇಮಿನ ಬಿದ್ದುಹೋಗಿದ್ದ ಕೋಟೆಗೋಡೆಗಳನ್ನು ಕಟ್ಟಿಸಿ ಭದ್ರಪಡಿಸಿದನು, ಪೌಳಿಗೋಡೆಯ ಮೇಲೆ ಬುರುಜು ಕಟ್ಟಿಸಿದನು. ಅಲ್ಲದೆ ಪೌಳಿಗೋಡೆಯ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿದನು. ಜೆರುಸಲೇಮಿನ ಹಳೇ ಭಾಗದ ಪೂರ್ವದ ಗೋಡೆಯನ್ನು ಭದ್ರಪಡಿಸಿದನು. ಅವನು ಅನೇಕ ಆಯುಧಗಳನ್ನು ಮತ್ತು ಗುರಾಣಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:5
18 ತಿಳಿವುಗಳ ಹೋಲಿಕೆ  

ಇಸ್ರಯೇಲರ ಅರಸ ಯೋವಾಷನು, ಯೆಹೋವಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆಹಿಡಿದನು. ಅವನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ಗೋಡೆಯನ್ನು ಸುಮಾರು ಇನ್ನೂರು ಮೀಟರಿನಷ್ಟು ಕೆಡವಿಬಿಟ್ಟನು.


ಫರೋಹನ ಮಗಳು (ದಾವೀದನಗರದಿಂದ) ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅನಂತರ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿದನು.


ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು.


ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ಇವರನ್ನು ನೋಡಿ, ಜುದೇಯದ ಅರಸ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.


ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ಅವನು ದಂಗೆಯೆದ್ದ ವಿವರಣೆ ಹೀಗಿದೆ : ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ


ತರುವಾಯ ಎಲ್ಲಾ ಶೆಕೆಮಿನವರೂ ಹಾಗು ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಸ್ಮಾರಕಸ್ತಂಭವಿರುವ ಓಕ್ ಮರದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.


ಆತ್ಮಸ್ವಾಧೀನವಲ್ಲದ ಮನುಷ್ಯ ಗೋಡೆಬಿದ್ದು ಕಾವಲಿಲ್ಲದ ಹಾಳೂರು.


ಇದಾದ ಮೇಲೆ, ಅವನು ಗೀಹೋನ್ ಬುಗ್ಗೆಯ ದಕ್ಷಿಣದ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ಕಣಿವೆಯಲ್ಲಿ, ಓಫೆಲ್ ಗುಡ್ಡದ ಸುತ್ತಲೂ ಇದ್ದ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿದನು. ಜುದೇಯ ನಾಡಿನ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲಿ ಸೇನಾಪತಿಗಳನ್ನು ಇರಿಸಿದನು.


ನೂಕುನುಗ್ಗಲಿಲ್ಲದೆ, ಸಾಲುಸಾಲಾಗಿ ನಡೆಯುತ್ತವೆ, ಸಾಲುಗಳನ್ನು ಒಡೆಯದೆ ಆಯುಧಗಳ ನಡುವೆ ನುಗ್ಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು