Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:23 - ಕನ್ನಡ ಸತ್ಯವೇದವು C.L. Bible (BSI)

23 ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಆಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಮೋನನು ತನ್ನ ತಂದೆ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ, ಯೆಹೋವ ದೇವರ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಆದರೆ ಆಮೋನನು ಅಧಿಕವಾಗಿ ಅಪರಾಧ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:23
9 ತಿಳಿವುಗಳ ಹೋಲಿಕೆ  

ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಮನಸ್ಸೆ ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು.


ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


“ಬೇಲ್ಶಚ್ಚರರೇ, ಅವರ ಕುಮಾರರಾದ ತಾವು ಇದನ್ನೆಲ್ಲ ತಿಳಿದುಕೊಂಡಿದ್ದರೂ ದೀನ ಮನಸ್ಕರಾಗದೆ ಇದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು