Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:6 - ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:6
24 ತಿಳಿವುಗಳ ಹೋಲಿಕೆ  

ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


“ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.


“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.


ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.


ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ತಮ್ಮ ಗಂಡುಹೆಣ್ಣುಮಕ್ಕಳನ್ನು ಯಾರೂ ಮೋಲೆಕನಿಗಾಗಿ ಬಲಿಯಗ್ನಿಪರೀಕ್ಷೆಗೆ ಈಡುಮಾಡದಂತೆ ಬೆನ್ಹಿನ್ನೋಮ್ ಕಣಿವೆಯಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು