Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:1 - ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಷೀಯನು ಅರಸನಾದಾಗ ಎಂಟು ವರ್ಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:1
18 ತಿಳಿವುಗಳ ಹೋಲಿಕೆ  

ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).


ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.


ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.


ಆದರೆ ನಾಡಿನ ಜನರು ಅರಸ ಆಮೋನನಿಗೆ ವಿರುದ್ಧ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ಮನಸ್ಸೆ ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು.


ಅನಂತರ ಎಲ್ಲ ಯೆಹೂದ್ಯರೂ ಕೂಡಿ ಹದಿನಾರು ವರ್ಷದವನಾಗಿದ್ದ ಉಜ್ಜೀಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.


ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು