Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:12 - ಕನ್ನಡ ಸತ್ಯವೇದವು C.L. Bible (BSI)

12 ಕೆಲಸಗಾರರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ, ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ಕೆಲಸಗಾರರು ನಂಬಿಗಸ್ತಿಕೆಯಿಂದ ಕೆಲಸ ಮಾಡಿದರು. ಅವರು ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೆಂದರೆ: ಜೆಕರ್ಯ ಮತ್ತು ಮೆಷುಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವುದರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:12
15 ತಿಳಿವುಗಳ ಹೋಲಿಕೆ  

ಕೆಲಸಗಾರರಿಗೆ ಸಂಬಳಕೊಡುವ ಮೇಸ್ತ್ರಿಗಳು ನಂಬಿಕಸ್ತರಾಗಿದ್ದುದರಿಂದ ಅವರ ವಶಕ್ಕೆ ಕೊಡಲಾದ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.


ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.


ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.


ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ.


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು, ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು; ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು.


ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲಾಗುವ ಹಣದ ಲೆಕ್ಕವನ್ನು ಕೇಳಬಾರದು,” ಎಂದು ಆಜ್ಞಾಪಿಸಿ ಅವನನ್ನು ಸರ್ವೇಶ್ವರನ ಆಲಯಕ್ಕೆ ಕಳುಹಿಸಿದನು.


ಲೇವಿಯ ಮಕ್ಕಳು - ಗೆರ್ಷೋನ್, ಕೆಹಾತ್ ಮತ್ತು ಮೆರಾರಿ.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರು, ಹೆಬ್ರೋನ್ ಗೋತ್ರದವರು ಹಾಗೂ ಉಜ್ಜೀಯೇಲ್ ಗೋತ್ರದವರು ಇದ್ದರು.


ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು, ಅವನ ಮಕ್ಕಳು, ಸಹೋದರರು, ಕದ್ಮೀಯೇಲನು, ಅವನ ಮಕ್ಕಳು, ಹೇನಾದಾದನ ಮಕ್ಕಳು, ಅವರ ಮಕ್ಕಳು, ಬಂಧುಗಳು, ಇವರು ಎಲ್ಲರು ಕೂಡಿಬಂದು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು