Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:22 - ಕನ್ನಡ ಸತ್ಯವೇದವು C.L. Bible (BSI)

22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಅಪ್ಪಣೆಯಾದಂತೆ ಆಕೆಯ ಬಳಿ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡ. ಆಕೆ ಜೆರುಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಅಪ್ಪಣೆಯಾದಂತೆ ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಿಲ್ಕೀಯನೂ ಅರಸನ ಸೇವಕರೂ ಪ್ರವಾದಿನಿಯಾಗಿದ್ದ ಹುಲ್ದಳ ಬಳಿಗೆ ಹೋದರು. ಆಕೆ ತೊಕ್ಹತನ ಮಗನಾದ ಶಲ್ಲೂಮನ ಹೆಂಡತಿಯಾಗಿದ್ದಳು. ತೊಕ್ಹತನು ಹಸ್ರನ ಮಗ. ಇವನು ಅರಸನ ಬಟ್ಟೆಬರೆಗಳ ಮುಖ್ಯಸ್ತನಾಗಿದ್ದನು. ಹುಲ್ದಳು ಜೆರುಸಲೇಮಿನ ಹೊಸ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಳು. ಅರಸನು ಹೇಳಿದ್ದನ್ನೆಲ್ಲಾ ಸೇವಕರು ಆಕೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:22
9 ತಿಳಿವುಗಳ ಹೋಲಿಕೆ  

ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.


ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.


ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.


ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಈ ಮಾತುಗಳನ್ನು ತಿಳಿಸಿರಿ:


“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು