Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:4 - ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:4
21 ತಿಳಿವುಗಳ ಹೋಲಿಕೆ  

ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II


ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್‍ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಜುದೇಯದ ಎಲ್ಲ ಪಟ್ಟಣಗಳಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದು ಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನ ವಿತ್ತು.


ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ಆದುದರಿಂದ ನೀವು ಹೀಗೆ ಮಾಡಬೇಕು; ಅವರ ಯಜ್ಞವೇದಿಗಳನ್ನು ಕೆಡವಬೇಕು, ಅವರ ಪವಿತ್ರಶಿಲೆಗಳನ್ನು ಒಡೆಯಬೇಕು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಬಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.


ತನ್ನ ತಂದೆ ಮನಸ್ಸೆಯ ಹಾಗೆಯೇ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆ ಮನಸ್ಸೆ ಮಾಡಿಸಿದ ಎಲ್ಲಾ ವಿಗ್ರಹಗಳಿಗೆ ಬಲಿ ಅರ್ಪಿಸಿ ಅವುಗಳನ್ನು ಪೂಜಿಸಿದನು.


ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?


ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.


ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.


ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು