Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:9 - ಕನ್ನಡ ಸತ್ಯವೇದವು C.L. Bible (BSI)

9 ಇವರು ಮಹಾಯಾಜಕ ಹಿಲ್ಕೀಯನ ಬಳಿಗೆ ಹೋಗಿ, ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು, ಅಂದರೆ, ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಯಿಮ್ ಮುಂತಾದ ಇಸ್ರಯೇಲ್‍ಕುಲಗಳಲ್ಲಿ ಉಳಿದವರಿಂದ ಎಲ್ಲ ಯೆಹೂದ ಬೆನ್ಯಾಮೀನ್ಯರಿಂದ ಹಾಗು ಜೆರುಸಲೇಮಿನವರಿಂದ ಸಂಗ್ರಹಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ದೇವಾಲಯದ ದುರಸ್ತಿಗಾಗಿ ಅರ್ಪಿಸಿದ್ದ ಕಾಣಿಕೆಯನ್ನು ಅವರು ಮಹಾಯಾಜಕನಾದ ಹಿಲ್ಕೀಯನಿಗೆ ತಂದುಕೊಟ್ಟರು. ಮನಸ್ಸೆ, ಎಫ್ರಾಯೀಮ್ ಮತ್ತು ಇಸ್ರೇಲ್ ರಾಜ್ಯದ ಜನರು ಕೊಟ್ಟ ಕಾಣಿಕೆಯನ್ನು ದ್ವಾರಪಾಲಕರಾದ ಲೇವಿಯರು ಒಟ್ಟುಗೂಡಿಸಿದರು. ಯೆಹೂದ, ಬೆನ್ಯಾಮೀನ್ ಕುಲದವರೂ ಜೆರುಸಲೇಮಿನಲ್ಲಿ ವಾಸಿಸುವರೂ ಕೊಟ್ಟ ಕಾಣಿಕೆಗಳನ್ನು ಅವರು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:9
13 ತಿಳಿವುಗಳ ಹೋಲಿಕೆ  

ಅವನ ಪದಾಧಿಕಾರಿಗಳು ಕೂಡ ಜನರಿಗೂ ಯಾಜಕರಿಗೂ ಲೇವಿಯರಿಗೂ ಬಲಿಪಶುಗಳನ್ನು ಸಂತೋಷವಾಗಿ ದಾನಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವರು ಯಾಜಕರಿಗೆ ಎರಡು ಸಾವಿರದ ಆರುನೂರು ಪಾಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.


ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.


ದೂತರು ಎಫ್ರಯಿಮ್, ಮನಸ್ಸೆ, ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಆದರೆ ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಅಪ್ಪಣೆಯಾದಂತೆ ಆಕೆಯ ಬಳಿ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡ. ಆಕೆ ಜೆರುಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


“ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡನು. ಹಿಲ್ಕೀಯ, ಶಾಫಾನನ ಮಗ ಅಹೀಕಾಮ್, ಮೀಕನ ಮಗ ಅಬ್ದೋನ್, ಲೇಖಕ ಶಾಫಾನ್, ಸಹಕಾರಿಯಾದ ಅಸಾಯ ಎಂಬುವರಿಗೆ,


ಇದಲ್ಲದೆ, ಲೇಖಕ ಶಾಫಾನನು ಅರಸನಿಗೆ, “ಯಾಜಕ ಹಿಲ್ಕೀಯ ನನಗೊಂದು ಗ್ರಂಥವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.


ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.


ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು