Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:11 - ಕನ್ನಡ ಸತ್ಯವೇದವು C.L. Bible (BSI)

11 ಲೇವಿಯರು ಪಾಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:11
11 ತಿಳಿವುಗಳ ಹೋಲಿಕೆ  

ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.


ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”


ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು.


ಯೋಷೀಯನು ಸರ್ವೇಶ್ವರನಿಗೆ ಜೆರುಸಲೇಮಿನಲ್ಲಿ ಪಾಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.


ಮೋಶೆಯಿಂದ ಪ್ರಕಟವಾದ ಸರ್ವೇಶ್ವರನ ವಿಧಿಗನುಸಾರ ನಿಮ್ಮ ಸಹೋದರರು ಪಾಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ಲೇವಿಯರು, ಚರ್ಮ ಸುಲಿದು ಹೋಮಕ್ಕಾಗಿ ತೆಗೆದಿಟ್ಟಿದ್ದನ್ನು ಪ್ರತ್ಯೇಕಿಸಿ, ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರ, ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಸರ್ವೇಶ್ವರನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲೂ ಅದೇ ಕ್ರಮವನ್ನು ಅನುಸರಿಸಿದರು.


ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು