Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:24 - ಕನ್ನಡ ಸತ್ಯವೇದವು C.L. Bible (BSI)

24 ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ, ಜೆರುಸಲೇಮಿಗೆ ತೆಗೆದುಕೊಂಡು ಹೋದರು. ಅಲ್ಲಿ ಅವನು ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಎಲ್ಲ ಯೆಹೂದ್ಯರೂ ಜೆರುಸಲೇಮಿನವರೂ ಯೋಷೀಯನ ಮರಣಕ್ಕಾಗಿ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:24
9 ತಿಳಿವುಗಳ ಹೋಲಿಕೆ  

ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.


ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.


ಲೋಕದಲ್ಲಿ ನಡೆಯುವ ನಿರರ್ಥಕ ಕಾರ್ಯ ಒಂದುಂಟು; ದುರ್ಜನರ ನಡತೆಗೆ ಆಗಬೇಕಾದ ತಕ್ಕ ಶಿಕ್ಷೆ ಸಜ್ಜನರಿಗೆ ಆಗುತ್ತದೆ. ಸಜ್ಜನರಿಗೆ ಸಿಗಬೇಕಾದ ಸಂಭಾವನೆ ದುರ್ಜನರಿಗೆ ಸಿಗುತ್ತದೆ. ಇದು ನಿರರ್ಥಕವೆಂದೇ ಹೇಳುತ್ತೇನೆ.


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು.


ಅಲ್ಲಿ ಬಿಲ್ಲುಗಾರರು ಅರಸ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು. ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿ,” ಎಂದನು.


ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು