Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:7 - ಕನ್ನಡ ಸತ್ಯವೇದವು C.L. Bible (BSI)

7 ಯೋಷೀಯನು, ಹಬ್ಬಕ್ಕೆ ಬಂದ ಜನರಿಗೆ ಪಾಸ್ಕ ಬಲಿಗಾಗಿ ಆಸ್ಥಾನದ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:7
10 ತಿಳಿವುಗಳ ಹೋಲಿಕೆ  

ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು.


ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು.


ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ


ಮೋಶೆಯಿಂದ ಪ್ರಕಟವಾದ ಸರ್ವೇಶ್ವರನ ವಿಧಿಗನುಸಾರ ನಿಮ್ಮ ಸಹೋದರರು ಪಾಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ಅವನ ಪದಾಧಿಕಾರಿಗಳು ಕೂಡ ಜನರಿಗೂ ಯಾಜಕರಿಗೂ ಲೇವಿಯರಿಗೂ ಬಲಿಪಶುಗಳನ್ನು ಸಂತೋಷವಾಗಿ ದಾನಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವರು ಯಾಜಕರಿಗೆ ಎರಡು ಸಾವಿರದ ಆರುನೂರು ಪಾಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಜೆರುಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆ, ಜನರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು