2 ಪೂರ್ವಕಾಲ ವೃತ್ತಾಂತ 36:23 - ಕನ್ನಡ ಸತ್ಯವೇದವು C.L. Bible (BSI)23 "ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ ತನಗೋಸ್ಕರ ಯೆಹೂದದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಹೋಗಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪಾರಸಿ ರಾಜನಾದ ಕೋರೆಷನು ತಿಳಿಸುವದೇನೆಂದರೆ: ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದ್ದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.