Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:22 - ಕನ್ನಡ ಸತ್ಯವೇದವು C.L. Bible (BSI)

22 ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಚೊಕ್ಕಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಗೆ, ದೇವಾಲಯದ ಮಹಾಪರಿಶುದ್ಧಸ್ಥಳದೊಳಗಣ ಬಾಗಲಿನ ಬಂಗಾರಕದಗಳು, ಪರಿಶುದ್ಧಸ್ಥಳದ ಬಂಗಾರ ಕದಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾ ಪವಿತ್ರಸ್ಥಳದೊಳಗಣ ಬಾಗಿಲಿನ ಕದಗಳು; ಪವಿತ್ರಸ್ಥಳದ ಕದಗಳು ಇವುಗಳನ್ನೆಲ್ಲಾ ಅಪ್ಪಟ ಬಂಗಾರದಿಂದ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:22
12 ತಿಳಿವುಗಳ ಹೋಲಿಕೆ  

ಅದು ಮಾತ್ರವಲ್ಲ, ಸರ್ವೇಶ್ವರನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅದು ಮಾತ್ರವಲ್ಲ, ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,


ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.


ದೀಪದ ಕುಡಿ ತೆಗೆಯುವ ಕತ್ತರಿಗಳನ್ನೂ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಿಸಬೇಕು.


ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಉತ್ಕೃಷ್ಟವಾದ ಬಂಗಾರದಿಂದ ಮಾಡಿದ ಅವುಗಳ ಹಣತೆ, ತಂಡಸ,


ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆ ಇದ್ದಲ್ಲಿ ಆ ತಗಡನ್ನು ಬಡಿಸಿದನು.


ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ; ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು