Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:11 - ಕನ್ನಡ ಸತ್ಯವೇದವು C.L. Bible (BSI)

11 ಕೂಡಿಬಂದಿದ್ದ ಯಾಜಕರು, ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೂಡಿಬಂದಿದ್ದ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:11
13 ತಿಳಿವುಗಳ ಹೋಲಿಕೆ  

ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಇಸ್ರಯೇಲರ ಅರಸ ದಾವೀದನೂ ಅವನ ಮಗ ಸೊಲೊಮೋನನೂ ಲಿಖಿತವಾಗಿ ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,


“ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.


ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;


ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ಎಂಬ ಲೇವಿಯರು ಮುಂದೆ ಬಂದು ತಮ್ಮ ಸಹೋದರರನ್ನು ಒಂದುಗೂಡಿಸಿದರು. ಅವರು ಅರಸನ ಆಜ್ಞಾಧಾರಕರಾಗಿ ಸರ್ವೇಶ್ವರನ ಧರ್ಮಶಾಸ್ತ್ರವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಸರ್ವೇಶ್ವರನ ಆಲಯವನ್ನು ಶುದ್ಧೀಕರಿಸುವುದಕ್ಕೆ ಸಿದ್ಧರಾದರು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಆಗ ಯಾಜಕರೂ ಲೇವಿಯರೂ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ತಮ್ಮನ್ನೇ ಶುದ್ಧೀಕರಿಸಿಕೊಂಡರು.


ಮೋಶೆಯಿಂದ ಪ್ರಕಟವಾದ ಸರ್ವೇಶ್ವರನ ವಿಧಿಗನುಸಾರ ನಿಮ್ಮ ಸಹೋದರರು ಪಾಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು