2 ಪೂರ್ವಕಾಲ ವೃತ್ತಾಂತ 5:2 - ಕನ್ನಡ ಸತ್ಯವೇದವು C.L. Bible (BSI)2 ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅನಂತರ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇವಿುಗೆ ಕರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿ |
ನೆತನೇಲನ ಮಗ ಶೆಮಾಯನೆಂಬ ಲೇವಿಯ ಲೇಖಕನು, ಅರಸನ ಮುಂದೆ, ಅಧಿಪತಿಗಳ ಮುಂದೆ ಹಾಗೂ ಯಾಜಕನಾದ ಚಾದೋಕ್, ಎಬ್ಯಾತಾರನ ಮಗ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬಗಳ ಮುಖ್ಯಸ್ಥರ ಮುಂದೆ, ಆ ವರ್ಗಗಳ ಪಟ್ಟಿಯನ್ನು ಬರೆಯುತ್ತಿದ್ದನು. ಎಲ್ಲಾಜಾರ್ಯರ ಒಂದು ವರ್ಗದವರ ಸರದಿ ಆದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವೆಸಲ್ಲಿಸಬೇಕೆಂದು ನೇಮಿಸಿ, ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡುತ್ತಿದ್ದರು.