Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:4 - ಕನ್ನಡ ಸತ್ಯವೇದವು C.L. Bible (BSI)

4 ಅವರ ಹಿರಿಯರೆಲ್ಲರೂ ಕೂಡಿಬಂದಿರಲಾಗಿ ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿ ಬಂದಾಗ, ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿಬಂದಿರಲಾಗಿ ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲಿನ ಹಿರಿಯರೆಲ್ಲರೂ ಒಟ್ಟಾಗಿ ಸೇರಿಬಂದಾಗ ಲೇವಿಯರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ, ಲೇವಿಯರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:4
8 ತಿಳಿವುಗಳ ಹೋಲಿಕೆ  

ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.


ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.


ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆಂದು ನೇಮಕವಾದ ಸ್ಥಳದಲ್ಲಿಟ್ಟರು.


‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.


ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಯಾಜಕರಾದ ಲೇವಿಯರು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲ ಪರಿಶುದ್ಧ ಉಪಕರಣಗಳನ್ನೂ ಹೊತ್ತುಕೊಂಡುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು