Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:16 - ಕನ್ನಡ ಸತ್ಯವೇದವು C.L. Bible (BSI)

16 ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು’ ಎಂಬುದಾಗಿ ವಾಗ್ದಾನ ಮಾಡಿದ್ದೀರಿ; ಅದನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್‍ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ - ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವೆನು ಎಂಬದಾಗಿ ವಾಗ್ದಾನಮಾಡಿದಿಯಲ್ಲಾ, ಅದನ್ನು ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿಮ್ಮ ಸಂತಾನದವರು, ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ನಿಯಮದ ಪ್ರಕಾರ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:16
16 ತಿಳಿವುಗಳ ಹೋಲಿಕೆ  

ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


“ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ‘ಇಸ್ರಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡೆಸುವರು’ ಎಂಬುದಾಗಿ ನಿನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II


ಕೈಬಿಡದ ನಿನ್ನೊಲವು ನನ್ನ ಕಣ್ಮುಂದಿದೆ I ನೀ ತೋರಿದ ಸತ್ಯಪಥದಲಿ, ನಾ ನಡೆದೆ II


ಇಸ್ರಯೇಲ್ ದೇವರೇ, ಸರ್ವೇಶ್ವರಾ, ನೀವು ನಿಮ್ಮ ದಾಸ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನನಗೆ ವಿಧೇಯನಾಗಿ ನಡೆದುಕೊಂಡರೆ


ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ?


ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು