Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:34 - ಕನ್ನಡ ಸತ್ಯವೇದವು C.L. Bible (BSI)

34 “ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಆ ಆಲಯದ ಕಡೆಗೂ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವದಕ್ಕೋಸ್ಕರ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನೀನು ನಿನ್ನ ಜನರನ್ನು ಅವರ ವೈರಿಗಳ ವಿರುದ್ಧವಾಗಿ ಯುದ್ಧಮಾಡಲು ಒಂದು ಸ್ಥಳಕ್ಕೆ ಕಳುಹಿಸುವಾಗ ನೀನು ಆರಿಸಿಕೊಂಡ ಈ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ಈ ದೇವಾಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:34
19 ತಿಳಿವುಗಳ ಹೋಲಿಕೆ  

ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ನೀವು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು