Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:1 - ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಪ್ರಾರ್ಥಿಸುವದನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿಬಿದ್ದು ಸರ್ವಾಂಗ ಹೋಮದ್ರವ್ಯಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು, ಯೆಹೋವನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:1
26 ತಿಳಿವುಗಳ ಹೋಲಿಕೆ  

ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.


ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.


ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.


ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಅಲ್ಲಿಯೇ ನಾನು ಇಸ್ರಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವುದು.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”


ಸೊಲೊಮೋನನು ಸರ್ವೇಶ್ವರನ ಆಲಯವನ್ನು, ತನ್ನ ಅರಮನೆಯನ್ನು ಹಾಗು ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಮುಗಿಸಿದನು.


ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು