Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:20 - ಕನ್ನಡ ಸತ್ಯವೇದವು C.L. Bible (BSI)

20 ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:20
21 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


“ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಅನ್ಯಜನ ನಮ್ಮನಣಕಿಸಿ ತಲೆಯಾಡಿಸುವಂತೆ ಮಾಡಿರುವೆ I ಅನ್ಯಾಯಕ್ಕೆ ಅಡ್ಡಹೆಸರಾಗುವಂತೆ ನಮ್ಮನು ಬಿಟ್ಟಿರುವೆ II


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ಕಿತ್ತು, ಕೆಡವಿ, ನಾಶಪಡಿಸಿ ಎಂದು ನಾನು ಎಂದಾದರೂ ಅಪ್ಪಣೆ ಕೊಡಲು ಸಾಧ್ಯ.


ಆದರೆ ಯಾವ ಜನಾಂಗ ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು. ಹೌದು, ಬೇರುಸಹಿತ ಕಿತ್ತುಹಾಕಿ ನಾಶಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ನೀವು ವಿಧೇಯರಾಗಿ ನಡೆಯದೆ ಹೋದರೆ ಸರ್ವೇಶ್ವರ ಈ ಜನರನ್ನು ಇನ್ನೂ ಮರುಭೂಮಿಯಲ್ಲೇ ಇರಿಸುವರು; ಈ ಸಮಸ್ತ ಜನಾಂಗದ ನಾಶಕ್ಕೆ ನೀವೇ ಕಾರಣರು ಆಗುವಿರಿ,” ಎಂದನು.


ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".


ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು.


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು