2 ಪೂರ್ವಕಾಲ ವೃತ್ತಾಂತ 7:3 - ಕನ್ನಡ ಸತ್ಯವೇದವು C.L. Bible (BSI)
3 ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.
3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
3 ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.
3 ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.
3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.
ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.
ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.
ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.
ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.
ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.