Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:5 - ಕನ್ನಡ ಸತ್ಯವೇದವು C.L. Bible (BSI)

5 ಅರಸ ಸೊಲೊಮೋನನು ಬಲಿಯಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ದೇವಾಲಯವನ್ನು ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:5
16 ತಿಳಿವುಗಳ ಹೋಲಿಕೆ  

ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು.


ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?


ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಸರ್ವೇಶ್ವರನಿಗೆ ಆ ದಿನ ಬಲಿದಾನ ಮಾಡಿದರು.


ಅರಸ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯಾತ ಕುರಿದನಗಳನ್ನು ಬಲಿದಾನ ಮಾಡಿದರು.


ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು.


ಮರುದಿನ ಅವರು ಸರ್ವೇಶ್ವರನಿಗೆ ಬಲಿಗಳನ್ನೂ ದಹನಬಲಿಗಳನ್ನೂ ಸಮರ್ಪಿಸಿದರು. ಆ ದಿನ ಬಲಿದಾನಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನ ಬಲಿಗಳನ್ನೂ ಸಮರ್ಪಿಸಿ


ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.


ಅರಸನೂ ಜನರೆಲ್ಲರೂ ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿದಾನಮಾಡಿದರು.


ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು