Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:1 - ಕನ್ನಡ ಸತ್ಯವೇದವು C.L. Bible (BSI)

1 ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಯೆರೂಸಲೇವಿುಗೆ ಬಂದಳು. ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:1
23 ತಿಳಿವುಗಳ ಹೋಲಿಕೆ  

ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


“ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ.


ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ಗಾದೆಗಳನ್ನೂ ಗೂಢಾರ್ಥಗಳನ್ನೂ ಜ್ಞಾನಿಯ ನುಡಿ ಹಾಗು ಒಗಟುಗಳನ್ನೂ ತಿಳಿದುಕೊಳ್ಳಲು ಸಹ ಇವು ಸಾಧನಗಳು.


ಬಿಚ್ಚುವೆನು ಆತನ ಮುಂದೆ ಚಿಂತೆಯ ಕಟ್ಟನು I ಅರಿಕೆ ಮಾಡುವೆನು ನನ್ನ ಕಷ್ಟ ಸಂಕಟವನು II


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II


ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಮುತ್ತಲಿನ ಜನಾಂಗಗಳಲ್ಲೆಲ್ಲಾ ಅವನ ಹೆಸರು ಪ್ರಸಿದ್ಧವಾಯಿತು.


ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.


ಯೊಕ್ಷಾನನು ಶೆಬಾ, ದೆದಾನ್ ಎಂಬವರನ್ನು ಪಡೆದನು. ಅಶ್ಯೂರ್ಯರು, ಲೆಟೂಶ್ಯರೂ ಲೆಯುಮ್ಯರು ದೆದಾನನಿಂದ ಹುಟ್ಟಿದರು.


ಓಬಾಲ್, ಅಬೀಮಯೇಲ್, ಶೆಬಾ,


ಸೊಲೊಮೋನನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಕೊಟ್ಟನು. ಅವುಗಳಲ್ಲಿ ಬಗೆಹರಿಸಲು ಅವನಿಗೆ ಅಸಾಧ್ಯವಾದದ್ದು ಒಂದೂ ಇರಲಿಲ್ಲ; ಎಲ್ಲವುಗಳಿಗೂ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು