Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:11 - ಕನ್ನಡ ಸತ್ಯವೇದವು C.L. Bible (BSI)

11 ಅರಸನು ಸುಗಂಧದ ಮರದಿಂದ ದೇವಾಲಯ ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ ಗಾಯಕರಿಗಾಗಿ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಸುಗಂಧದ ಮರವನ್ನು ಹಿಂದೆಂದೂ ಜುದೇಯ ನಾಡಿನಲ್ಲಿ ಕಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನು ಸುಗಂಧದ ಮರದಿಂದ ದೇವಾಲಯ, ಅರಮನೆ ಇವುಗಳಿಗೆ ಸೋಪಾನಗಳನ್ನೂ ಗಾಯಕರಿಗೋಸ್ಕರ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ [ಸುಗಂಧದ ಮರವು] ಮುಂಚೆ ಯೆಹೂದ ದೇಶದಲ್ಲಿ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸುಗಂಧದ ಮರಗಳಿಂದ ಸೊಲೊಮೋನನು ದೇವಾಲಯದ ಮತ್ತು ಅರಮನೆಯ ಮೆಟ್ಟಲುಗಳನ್ನು ಮಾಡಿಸಿದನು; ಅಲ್ಲದೆ ಗಾಯಕರಿಗಾಗಿ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ಅದರಿಂದ ತಯಾರಿಸಿದನು. ಯೆಹೂದ ಪ್ರಾಂತ್ಯದಲ್ಲಿ ಯಾರೂ ಅಂತಹ ಸುಂದರವಾದ ಸುಗಂಧವಸ್ತುಗಳನ್ನು ನೋಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ, ಅರಮನೆಗೋಸ್ಕರವೂ ಸೋಪಾನಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು. ಯೆಹೂದ ದೇಶದಲ್ಲಿ ಹಿಂದೆಂದೂ ಇಂಥವುಗಳನ್ನು ಕಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:11
9 ತಿಳಿವುಗಳ ಹೋಲಿಕೆ  

ಅರಸನು ಸುಗಂಧದ ಮರದಿಂದ ದೇವಾಲಯಕ್ಕೆ ಹಾಗು ಅರಮನೆಗಳಿಗೆ ಮೆಟ್ಟಲುಗಳನ್ನು ವಾದ್ಯಗಾರರಿಗಾಗಿ ಕಿನ್ನರಿಗಳನ್ನು ಹಾಗು ಸ್ವರಮಂಡಲಗಳನ್ನು ಮಾಡಿಸಿದನು. ಆಗ ಬಂದಷ್ಟು ಸುಗಂಧದಮರ ಇಂದಿನವರೆಗೂ ಬರಲಿಲ್ಲ, ಮತ್ತು ಯಾರೂ ಅಷ್ಟನ್ನು ಕಾಣಲೇ ಇಲ್ಲ.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:


ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ಅಂತೆಯೇ ಲೆಬನೋನಿನಿಂದ ದೇವದಾರು ಮರವನ್ನೂ ತುರಾಯಿಮರವನ್ನೂ ಸುಗಂಧದ ಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಕೆಲಸಮಾಡುವರು.


ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್‍ದೇಶದ ಬಂಗಾರವನ್ನಲ್ಲದೆ ಸುಗಂಧದ ಮರವನ್ನೂ ರತ್ನಗಳನ್ನೂ ತಂದರು.


ಅರಸ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು