Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:29 - ಕನ್ನಡ ಸತ್ಯವೇದವು C.L. Bible (BSI)

29 ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿ ನಾತಾನನ ಚರಿತ್ರೆ ಶೀಲೋವಿನವನಾದ ಅಹೀಯನ ಪ್ರವಾದನೆ ಹಾಗೂ ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿಡಲಾಗಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯು ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆ, ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಸೊಲೊಮೋನನು ಪ್ರಾರಂಭದಿಂದ ಅಂತ್ಯದ ತನಕ ಮಾಡಿದ ಎಲ್ಲಾ ವಿಷಯಗಳನ್ನು ಪ್ರವಾದಿಯಾದ ನಾತಾನನು ಬರೆದ ಲೇಖನಗಳಲ್ಲಿಯೂ, ಶೀಲೋವದ ಅಹೀಯನ ಪ್ರವಾದನೆಯಲ್ಲಿಯೂ ಮತ್ತು ದೇವದರ್ಶಿಯಾದ ಇದ್ದೋವಿನ ದರ್ಶನಗಳ ಪುಸ್ತಕದಲ್ಲಿಯೂ ಬರೆಯಲಾಗಿದೆ. ದೇವದರ್ಶಿಯಾದ ಇದ್ದೋ, ನೆಬಾಟನ ಮಗನಾದ ಯಾರೊಬ್ಬಾಮನ ವಿಷಯವಾಗಿಯೂ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸೊಲೊಮೋನನ ಉಳಿದ ಕ್ರಿಯೆಗಳು, ಮೊದಲನೆಯವುಗಳೂ, ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ, ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ, ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:29
15 ತಿಳಿವುಗಳ ಹೋಲಿಕೆ  

ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.


ಅಬೀಯನ ಉಳಿದ ಚರಿತ್ರೆ ಹಾಗೂ ನಡೆನುಡಿಗಳು ಪ್ರವಾದಿ ಇದ್ದೋವಿನ ವ್ಯಾಖ್ಯಾನದಲ್ಲಿ ಲಿಖಿತವಾಗಿವೆ.


ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.


ಅರಸ ಸೊಲೊಮೋನನಿಗೆ ವಿರುದ್ಧ ದಂಗೆ ಎದ್ದವರಲ್ಲಿ, ಅವನ ಸೇವಕನೂ ಚರೇದ ಊರಿನ ಎಫ್ರಯೀಮ್ಯನಾದ ನೆಬಾಟನ ಮಗನೂ ಆಗಿದ್ದ, ಯಾರೊಬ್ಬಾಮ ಎಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆ ಅವನ ತಾಯಿ.


ಇತ್ತ ಅರಸ ಸೊಲೊಮೋನನಿಗೆ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಈಜಿಪ್ಟಿನಿಂದ ಹಿಂದಿರುಗಿ ಬಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು