Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:7 - ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಪ್ರಜೆಗಳು ಹಾಗೂ ಸದಾ ನಿಮ್ಮ ಸನ್ನಿಧಿಯಲ್ಲಿ ಇದ್ದುಕೊಂಡು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ಸೇವಕರು ಧನ್ಯರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಹೆಂಡತಿಯರೂ ನಿನ್ನ ಅಧಿಕಾರಿಗಳೂ ಧನ್ಯರು. ನಿನ್ನ ಸೇವೆಮಾಡುವ ಇವರು ನಿನ್ನ ಜ್ಞಾನೋಪದೇಶವನ್ನು ಯಾವಾಗಲೂ ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:7
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


ಬೆಳ್ಳಿಗಿಂತ ಜ್ಞಾನ ಗಳಿಕೆ ಶ್ರೇಷ್ಠ, ಬಂಗಾರಕ್ಕಿಂತ ಜ್ಞಾನ ಸಂಪಾದನೆ ಉತ್ಕೃಷ್ಟ.


ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!


ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ, ನಿಮ್ಮ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.


ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು