Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:8 - ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ದೇವರಿಗೆ ಸ್ತೋತ್ರವಾಗಲಿ. ಆತನು ನಿನ್ನಲ್ಲಿ ಸಂತೋಷಿಸಿ ತನ್ನ ಸಿಂಹಾಸನದಲ್ಲಿ ನಿನ್ನನ್ನು ಕುಳ್ಳಿರಿಸಿದ್ದಾನೆ. ನಿನ್ನ ದೇವರು ಇಸ್ರೇಲನ್ನು ಪ್ರೀತಿಸುತ್ತಾನೆ ಮತ್ತು ಶಾಶ್ವತವಾಗಿ ಪೋಷಿಸುತ್ತಾನೆ. ಅದಕ್ಕಾಗಿಯೇ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡುವುದಕ್ಕಾಗಿ ನಿನ್ನನ್ನು ಇಸ್ರೇಲಿನ ಅರಸನನ್ನಾಗಿ ಮಾಡಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:8
31 ತಿಳಿವುಗಳ ಹೋಲಿಕೆ  

ಟೈರಿನ ಅರಸ ಹೂರಾಮನು ಪತ್ರದ ಮೂಲಕ ಸೊಲೊಮೋನನಿಗೆ, “ಸರ್ವೇಶ್ವರ ತಮ್ಮ ಪ್ರಜೆಗಳನ್ನು ಪ್ರೀತಿಸುವವರು. ಆದುದರಿಂದ ನಿನ್ನನ್ನು ಆ ಜನರ ಅರಸನನ್ನಾಗಿ ನೇಮಿಸಿದ್ದಾರೆ.


ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು.


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II


ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ I ಅಕ್ಕರೆಯಿಂದ ಮೆಚ್ಚಿ ರಕ್ಷಕನಾದ ನನಗೆ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ;


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ನಿಮ್ಮ ಪ್ರಜೆಗಳು ಹಾಗೂ ಸದಾ ನಿಮ್ಮ ಸನ್ನಿಧಿಯಲ್ಲಿ ಇದ್ದುಕೊಂಡು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ಸೇವಕರು ಧನ್ಯರು!


ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ.


ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.


ಮರ ಕಡಿಯುವ ನಿನ್ನ ಆಳುಗಳಿಗಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿ, ಎರಡು ಸಾವಿರ ಮೆಟ್ರಿಕ್ ಟನ್ ಜವೆಗೋದಿ, ನಾಲ್ಕು ಲಕ್ಷ ಲೀಟರ್ ದ್ರಾಕ್ಷಾರಸ ಹಾಗೂ ನಾಲ್ಕು ಲಕ್ಷ ಲೀಟರ್ ಎಣ್ಣೆ ಇವುಗಳನ್ನು ಕೊಡುವೆನು,” ಎಂದು ಹೇಳಿಸಿದನು.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು