Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:1 - ಕನ್ನಡ ಸತ್ಯವೇದವು C.L. Bible (BSI)

1 ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚೊ ಅಪೊಸ್ತಲ್ ಅನಿ ಸೆವಕ್ ಸಿಮಾವ್ ಪೆದ್ರು, ಅಮ್ಚ್ಯಾ ದೆವಾಚ್ಯಾ ನಿತಿವಂತ್ಪಾನಾ ಅನಿ ಸುಟ್ಕಾ ದಿನಾರ್‍ಯಾ ಜೆಜು ಕ್ರಿಸ್ತಾಚೊ ವಿಶ್ವಾಸ್ ಕಿಮ್ತಿಚೊ ಮನುನ್ ದಿಲ್ಲ್ಯಾಕ್ನಿ ಲಿವ್ತಲೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:1
40 ತಿಳಿವುಗಳ ಹೋಲಿಕೆ  

“ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅಂದರೆ, ನನ್ನ ವಿಶ್ವಾಸದಿಂದ ನೀವೂ ನಿಮ್ಮ ವಿಶ್ವಾಸದಿಂದ ನಾನೂ - ಪರಸ್ಪರ ಪ್ರಯೋಜನವನ್ನು ಪಡೆಯಬೇಕೆಂಬುದೇ ನನ್ನ ಆಶಯ.


ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.


ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ;


ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ?


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).


ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು