Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:15 - ಕನ್ನಡ ಸತ್ಯವೇದವು C.L. Bible (BSI)

15 ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಸೆ ರ್‍ಹಾತಾನಾ, ಮಾಜ್ಯಾ ಮರ್ನಾಚ್ಯಾ ಮಾನಾ ಹಿ ವಿಶಯಾ ತುಮ್ಕಾ ಯಾದ್ ರ್‍ಹಾಯ್ ಸಾರ್ಕೆ ಕರುಕ್ ಮಿಯಾ ಮಾಕಾ ಹೊತಾ ತವ್ಡೆ ಬರೆ ಕರುಕ್ ಖಟ್ಪಟ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:15
11 ತಿಳಿವುಗಳ ಹೋಲಿಕೆ  

ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ಈ ವಿಷಯಗಳೆಲ್ಲಾ ನಿಮಗೆ ತಿಳಿದೇ ಇವೆ; ನೀವು ಅಂಗೀಕರಿಸಿದ ಸತ್ಯದಲ್ಲಿ ಸ್ಥಿರವಾಗಿಯೂ ಇದ್ದೀರಿ. ಆದರೂ ಇವುಗಳನ್ನು ಪದೇ ಪದೇ ನಿಮ್ಮ ಜ್ಞಾಪಕಕ್ಕೆ ತರಲು ಅಪೇಕ್ಷಿಸುತ್ತೇನೆ.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣತ್ಯಾಗಮಾಡಿ ದೈವೇಚ್ಛೆಯನ್ನು ನೆರವೇರಿಸಲಿದ್ದ ವಿಷಯವಾಗಿ ಸಂಭಾಷಿಸುತ್ತಿದ್ದರು.


ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.


ನಾನು ನಿಮ್ಮೊಡನೆ ಇದ್ದಾಗಲೇ ಇದೆಲ್ಲವನ್ನು ತಿಳಿಸಿದ ನೆನಪು ನಿಮಗಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು