Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:3 - ಕನ್ನಡ ಸತ್ಯವೇದವು C.L. Bible (BSI)

3 ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚ್ಯಾ ದೈವಿಕ್ ಬಳಾನ್ ಅಮ್ಕಾ ಅಮ್ಚ್ಯಾ ಜಿವನಾಕ್ ಅನಿ ದೆವಸ್ಪಾನಾಕ್ ಪಾಜೆ ಹೊಲ್ಲೆ ಸಗ್ಳೆ ದಿಲ್ಯಾನಾಯ್, ತೆಚ್ಯಾ ಶಾನ್ಪಾನಾಚ್ಯಾ ವೈನಾ ಅಮ್ಕಾ ತೆನಿ ಅಪ್ನಾಚ್ಯಾ ಸ್ವತಾಚ್ಯಾ ಮಹಿಮೆನ್ ಅನಿ ಬರೆಪಾನಾನ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:3
39 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.


ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.


ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!


ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.


ಮಗಳೇ, ಭಯಪಡಬೇಡ, ನೀನು ಸುಗುಣಶೀಲೆ ಎಂದು ಊರಿಗೆಲ್ಲಾ ತಿಳಿದಿದೆ; ನೀನು ಕೇಳಿಕೊಂಡದ್ದನ್ನು ನೆರವೇರಿಸುವೆನು.


ಗಂಡನು, “ಗುಣವತಿಯರು ಎಷ್ಟೋಮಂದಿ ಇರುವರು; ಅವರೆಲ್ಲರಿಗಿಂತ ನೀನೆ, ಶ್ರೇಷ್ಠಳು” ಎಂದು ಕೊಂಡಾಡುವನು.


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.


ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು