Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯರೇ, ಈಗ ನಾನು ನಿಮಗೆ ಬರೆಯುತ್ತಿರುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲೂ ನಿಮ್ಮ ನಿರ್ಮಲ ಮನಸ್ಸನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಸ್ನೇಹಿತರೇ, ನಾನು ನಿಮಗೆ ಬರೆಯುತ್ತಿರುವ ಎರಡನೆ ಪತ್ರವಿದು. ನಿಮ್ಮ ಯಥಾರ್ಥವಾದ ಮನಸ್ಸು ಮತ್ತೆ ನೆನಪು ಮಾಡಿಕೊಳ್ಳಲಿ ಎಂದು ನಾನು ಈ ಎರಡು ಪತ್ರಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಪ್ರಿತಿಚ್ಯಾನು, ಮಿಯಾ ತುಮ್ಕಾ ಲಿವ್ತಲಿ ಹಿ ದೊನ್ವೆಚಿ ಚಿಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:1
15 ತಿಳಿವುಗಳ ಹೋಲಿಕೆ  

ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.


ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II


ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.


ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು