Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:11 - ಕನ್ನಡ ಸತ್ಯವೇದವು C.L. Bible (BSI)

11 ಸೌಲನು, ಅವನ ಮಗ ಯೋನಾತಾನನು ಹಾಗೂ ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಪ್ರಜೆಗಳಾದ ಇಸ್ರಾಯೇಲ್ಯರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ದಾವೀದನು ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲ ಹರಿದುಕೊಂಡನು. ದಾವೀದನ ಜೊತೆಯಲ್ಲಿದ್ದವರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:11
15 ತಿಳಿವುಗಳ ಹೋಲಿಕೆ  

ಆಗ ಅರಸನು ದುಃಖತಾಳಲಾರದೆ ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.


ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.


ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು:


ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ಆಗ ಅವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಿದರು; ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು, ನಿಲುವಂಗಿಯನ್ನು ಹರಿದುಕೊಂಡು, ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.


ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು