Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:19 - ಕನ್ನಡ ಸತ್ಯವೇದವು C.L. Bible (BSI)

19 ಹದದೆಜೆರನಿಗೆ ದಾಸರಾಗಿದ್ದ ರಾಜರೆಲ್ಲರೂ ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಸಂಧಾನ ಮಾಡಿಕೊಂಡು ಅವರ ಅಧೀನರಾದರು. ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯ ಮಾಡುವುದಕ್ಕೆ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಒಪ್ಪಂದಮಾಡಿಕೊಂಡು ಅವರ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯ ಮಾಡುವದಕ್ಕೆ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹದದೆಜೆರನ ಸೇವೆಯಲ್ಲಿದ್ದ ರಾಜರಿಗೆ ಇಸ್ರೇಲರು ತಮ್ಮನ್ನು ಸೋಲಿಸಿದುದು ತಿಳಿದುಬಂತು. ಆದುದರಿಂದ ಅವರು ಇಸ್ರೇಲರೊಂದಿಗೆ ಶಾಂತಿಸಂಧಾನ ಮಾಡಿಕೊಂಡು ಅವರ ಸೇವಕರಾದರು. ಅಂದಿನಿಂದ ಅಮ್ಮೋನಿಯರಿಗೆ ಮತ್ತೆ ಸಹಾಯಮಾಡಲು ಅರಾಮ್ಯರು ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:19
12 ತಿಳಿವುಗಳ ಹೋಲಿಕೆ  

ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.


ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಹದರೆಜೆರನಿಗೆ ದಾಸರಾಗಿ ಇದ್ದವರು ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು, ದಾವೀದನೊಡನೆ ಸಂಧಾನ ಮಾಡಿಕೊಂಡು ಅವನಿಗೆ ಅಧೀನರಾದರು.ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯಮಾಡಲು ಸಮ್ಮತಿಸಲಿಲ್ಲ.


ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಏಕೆಂದರೆ ಹಾಚೋರ್ ಪೂರ್ವಕಾಲದಲ್ಲಿ ಆ ರಾಜ್ಯಗಳಲ್ಲೆಲ್ಲಾ ಶ್ರೇಷ್ಠವಾದುದು.


ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು