Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:11 - ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಊರೀಯನು - ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:11
19 ತಿಳಿವುಗಳ ಹೋಲಿಕೆ  

ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.


ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು.


ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.


ಹನ್ನಳು ಏಲಿಗೆ, “ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ನಿಮಗೆ ಪ್ರಭೂವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ.


ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು.


ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!


ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.


ದಾವೀದನು ಆ ಫಿಲಿಷ್ಟಿಯನೊಡನೆ ಯುದ್ಧಮಾಡಲು ಹೊರಟಿದ್ದನ್ನು ಸೌಲನು ನೋಡಿದನು. ತನ್ನ ಸೇನಾಪತಿಯಾದ ಅಬ್ನೇರನನ್ನು ಉದ್ದೇಶಿಸಿ, “ಅಬ್ನೇರನೇ, ಈ ತರುಣ ಯಾರ ಮಗ?” ಎಂದು ವಿಚಾರಿಸಿದನು. ಅದಕ್ಕೆ ಅಬ್ನೇರನು, “ಅರಸರೇ, ತಮ್ಮ ಜೀವದಾಣೆ, ನನಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟನು.


ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ದಾವೀದನು ಊರೀಯನಿಗೆ, “ನೀನು ದೀರ್ಘಪ್ರಯಾಣಮಾಡಿ ಬಂದಿರುವೆಯಲ್ಲವೆ? ಏಕೆ ಮನೆಗೆ ಹೋಗಲಿಲ್ಲ?” ಎಂದನು.


ಅವರಿಗೆ ಮೋಶೆ, “ನಿಮ್ಮ ಬಂಧುಬಳಗದವರು ಯುದ್ಧಕ್ಕೆ ಹೊರಡುವಾಗ ನೀವು ಇಲ್ಲೇ ಕೂತಿರಬೇಕೆನ್ನುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು