Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:25 - ಕನ್ನಡ ಸತ್ಯವೇದವು C.L. Bible (BSI)

25 ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ದಾವೀದನು ದೂತನಿಗೆ ನೀನು ಹೋಗಿ - ಇದಕ್ಕೋಸ್ಕರವಾಗಿ ವ್ಯಸನ ಪಡಬೇಡ; ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುವದು. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬದಾಗಿ ಅರಸನು ಆಜ್ಞಾಪಿಸುತ್ತಾನೆಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದಾವೀದನು ಸಂದೇಶಕನಿಗೆ, “ನೀನು ಹೋಗಿ ಯೋವಾಬನಿಗೆ: ‘ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಈ ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬ ನಗರದ ಮೇಲೆ ಧೈರ್ಯವಾಗಿ ಆಕ್ರಮಣಮಾಡು. ಆಗ ನೀನು ನಗರವನ್ನು ಗೆಲ್ಲುವೆ!’ ಈ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:25
8 ತಿಳಿವುಗಳ ಹೋಲಿಕೆ  

ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅರಮನೆ ಇದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.


ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.


ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿಮ್ಮ ಸೇವಕರ ಮೇಲೆ ಬಾಣಗಳನ್ನು ಎಸೆದುದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮಡಿದನು.”


ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿ ಕೇಳಿ ಗಂಡನಿಗಾಗಿ ಅತ್ತು ಗೋಳಾಡಿದಳು.


ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು