Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:27 - ಕನ್ನಡ ಸತ್ಯವೇದವು C.L. Bible (BSI)

27 ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು; ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಈ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:27
16 ತಿಳಿವುಗಳ ಹೋಲಿಕೆ  

ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.


ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ಬೆಳ್ಳಿನಾಣ್ಯ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗ ಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.


ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್,


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು