Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:16 - ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ ಉಪವಾಸಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿಕಳೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:16
17 ತಿಳಿವುಗಳ ಹೋಲಿಕೆ  

ಆಗ ಅರಸನು ದುಃಖತಾಳಲಾರದೆ ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.


ಮೂರು ದಿನಗಳವರೆಗೂ ಅವನಿಗೆ ಕಣ್ಣು ಕಾಣಿಸಲಿಲ್ಲ. ಅಲ್ಲದೆ ಅದುವರೆಗೂ ಅವನು ಅನ್ನಪಾನಗಳನ್ನು ಮುಟ್ಟಲಿಲ್ಲ.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ I ಚುಚ್ಚುಮಾತಿಗೆ ಕಾರಣವಾಯಿತಲ್ಲಾ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಸರ್ವೇಶ್ವರನ ಶಿಕ್ಷೆಯಿಂದಾಗಿ ಬಹು ಅಸ್ವಸ್ಥವಾಯಿತು.


ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.


ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು