Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:23 - ಕನ್ನಡ ಸತ್ಯವೇದವು C.L. Bible (BSI)

23 ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈಗ ಸತ್ತಿದ್ದಾನಲ್ಲಾ, ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವದು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವದಿಲ್ಲ ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಈಗ ಸತ್ತಿದೆಯಲ್ಲಾ. ನಾನು ಉಪವಾಸ ಮಾಡುವುದು ಏಕೆ? ನಾನು ಅದನ್ನು ತಿರುಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು. ಆದರೆ ಅದು ನನ್ನ ಬಳಿಗೆ ತಿರುಗಿ ಬರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:23
6 ತಿಳಿವುಗಳ ಹೋಲಿಕೆ  

ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.


“ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು