Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ‘ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನು ನಾನು; ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ನಾತಾನನು ದಾವೀದನನ್ನು ನೋಡಿ - ಆ ಮನುಷ್ಯನು ನೀನೇ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ ಹೇಳುವದೇನಂದರೆ - ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದವನೂ ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:7
22 ತಿಳಿವುಗಳ ಹೋಲಿಕೆ  

ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಸರ್ವೇಶ್ವರಸ್ವಾಮಿ ದಾವೀದನನ್ನು ಸೌಲನ ಕೈಗೂ ಇತರ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿದರು. ಈ ಕಾರಣ ಅವನು ಸರ್ವೇಶ್ವರಸ್ವಾಮಿಯನ್ನು ಕೀರ್ತಿಸುತ್ತಾ ಈ ಜಯಗೀತೆಯನ್ನು ಹಾಡಿದನು:


ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ ಎದುರಾಳಿಗೆ ತಪ್ಪಿಸಿ ನನ್ನನುನ್ನತಿಗೇರಿಸಿದೆ ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.


ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.


“ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.


“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.


ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.


ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II


ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು.


ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು:


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಅಪ್ಪಣೆಯನ್ನು ತಿಳಿಸು. ಅವರು ಅವನಿಗೆ, ‘ನಾನು ನಿನ್ನನ್ನು ಜನಸಾಮಾನ್ಯರ ಮಧ್ಯದಿಂದ ಉನ್ನತ ಸ್ಥಾನಕ್ಕೆ ಏರಿಸಿದೆ; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ.


“ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ನಾನು ಬೇರೆ ಕೆಲಸದಲ್ಲಿದ್ದಾಗ ಆ ವ್ಯಕ್ತಿ ತಪ್ಪಿಸಿಕೊಂಡು ಹೋದನು,” ಎಂದು ಮೊರೆಯಿಟ್ಟನು. ಇಸ್ರಯೇಲರ ಅರಸನು ಇವನಿಗೆ, “ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೇ?’ ಎಂದು ನುಡಿದನು.


ಅಂತೆಯೇ, ಪ್ರವಾದಿ ಯೆರೆಮೀಯನು ಈ ವಿಷಯಗಳನ್ನೆಲ್ಲ ಜುದೇಯದ ಅರಸ ಚಿದ್ಕೀಯನಿಗೆ ಜೆರುಸಲೇಮಿನಲ್ಲೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು