Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:3 - ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗ ಹಾಗು ಬಹು ಯುಕ್ತಿವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:3
21 ತಿಳಿವುಗಳ ಹೋಲಿಕೆ  

ತರುವಾಯ ಜೆಸ್ಸೆಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು.


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.


ತನ್ನ ಪತ್ನಿ ಜೆರೆಷಳಿಗೂ ಎಲ್ಲಾ ಆಪ್ತರಿಗೂ ತನಗೆ ಸಂಭವಿಸಿದುದನ್ನೆಲ್ಲಾ ವರದಿಮಾಡಿದನು. ಆಗ ಅವನ ಪಂಡಿತರೂ ಪತ್ನಿಯೂ ಅವನಿಗೆ, “ಯಾವನಿಂದ ನಿಮ್ಮ ಪತನವು ಪ್ರಾರಂಭವಾಯಿತೋ ಆ ವ್ಯಕ್ತಿ ಒಂದು ವೇಳೆ ಯೆಹೂದ್ಯನಾಗಿದ್ದರೆ, ನೀವು ಅವನನ್ನೆಂದಿಗೂ ಜಯಿಸಲಾರಿರಿ. ಅವನ ಮುಂದೆ ಬಿದ್ದು ಹಾಳಾಗುವಿರಿ,” ಎಂದು ಎಚ್ಚರವಿತ್ತರು.


ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಆದರೂ ಸಹನೆ ಕಳೆದುಕೊಳ್ಳದೆ ಮನೆಗೆ ಹೋಗಿ ತನ್ನ ಆಪ್ತರನ್ನೂ ತನ್ನ ಪತ್ನಿ ಜೆರೆಷಳನ್ನೂ ಕರೆಯಿಸಿದನು.


ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;


ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದುಹಾಕಿದ್ದಾರೆಂದು ನನ್ನ ಒಡೆಯರು ನೆನೆಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.


ಇತ್ತ ಸಂಸೋನನ ಹೆಂಡತಿಯನ್ನು ಅವನ ಆಪ್ತರೊಬ್ಬನಿಗೆ ಮದುವೆ ಮಾಡಿಕೊಟ್ಟರು.


ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವ ಸಲುವಾಗಿ ತನ್ನ ಗೆಳೆಯ ಆ ಅದುಲ್ಲಾಮ್ಯನ ಸಂಗಡ ಹೋತಮರಿಯನ್ನು ಕಳಿಸಿದನು. ಆಕೆ ಅವನಿಗೆ ಸಿಕ್ಕಲಿಲ್ಲ.


ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು.


ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.


ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.


ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆ ಕನ್ಯೆ ಆಗಿದ್ದುದರಿಂದ ಆಕೆಗೆ ಏನು ಮಾಡುವುದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು.


ಅವನು ಒಂದು ದಿನ ಅಮ್ನೋನನನ್ನು, “ರಾಜಪುತ್ರರೇ, ನೀವು ದಿನೇದಿನೇ ಕ್ಷೀಣವಾಗುತ್ತಾ ಬರುವುದೇಕೆ? ನನಗೆ ತಿಳಿಸಬಾರದೇ?,” ಎಂದು ಕೇಳಿದನು. ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ,” ಎಂದು ಉತ್ತರಕೊಟ್ಟನು.


ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.


ಜೆಸ್ಸೆಯ ಏಳು ಜನ ಮಕ್ಕಳು: ಎಲೀಯಾಬ್, ಅಬೀನಾದಾಬ್, ಶಿಮ್ಮ,


ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯಾಗಿದ್ದನು; ಹಕ್ಮೋನಿಯ ಮಗ ಯೆಹೀಯೇಲನು ರಾಜಪುತ್ರ ಪಾಲಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು